ಪಾಕಿಸ್ತಾನ ವಿರುದ್ಧದ ಸೇನಾ ಕಾರ್ಯಾಚರಣೆಯನ್ನು ಸುದ್ದಿವಾಹಿನಿಗಳು ನೇರ ಪ್ರಸಾರ ಮಾಡುವುದನ್ನು ನಿಲ್ಲಿಸಬೇಕು ಎಂದು ರಕ್ಷಣಾ ಇಲಾಖೆ ಸೂಚನೆ ನೀಡಿದೆ. ಈ ಹಿಂದಿನ ಕಾರ್ಯಾಚರಣೆಗಳ ಸಂದರ್ಭದಲ್ಲಿ ಆದ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ಸೇನೆಯ ಸಿಬ್ಬಂದಿಯ ಜೀವಕ್ಕೆ ಅಪಾಯವಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಸೂಚನೆ ನೀಡಲಾಗಿದೆ.ಎಲ್ಲಾ ಮಾಧ್ಯಮ ವಾಹಿನಿಗಳು, ಡಿಜಿಟಲ್ ವೇದಿಕೆಗಳು ಮತ್ತು ಇತರರು ರಕ್ಷಣಾ ಕಾರ್ಯಾಚರಣೆಗಳು ಮತ್ತು ಭದ್ರತಾ ಪಡೆಗಳ ಚಲನವಲನಗಳ ನೇರ ಪ್ರಸಾರ ಅಥವಾ ರಿಯಲ್ ಟೈಮ್ ರಿಪೋರ್ಟ್ ಮಾಡುವುದನ್ನು ನಿಲ್ಲಿಸುವಂತೆ ಸೂಚಿಸಲಾಗಿದೆ. ಅಂತಹ ಸೂಕ್ಷ್ಮ ಮಾಹಿತಿಯನ್ನು ಬಹಿರಂಗಪಡಿಸುವುದು ಕಾರ್ಯಾಚರಣೆಯ ಪರಿಣಾಮಕಾರಿತ್ವಕ್ಕೆ ಅಪಾಯ ಉಂಟುಮಾಡಬಹುದು ಮತ್ತು ಸೇನಾ ಸಿಬ್ಬಂದಿ ಜೀವಗಳಿಗೆ ಅಪಾಯವನ್ನು ಉಂಟುಮಾಡಬಹುದು ಎಂದು ರಕ್ಷಣಾ ಇಲಾಖೆ ಹೇಳಿದೆ.
ಕಾರ್ಗಿಲ್ ಯುದ್ಧ, 26/11 ದಾಳಿಗಳು ಮತ್ತು ಕಂದಹಾರ್ ಅಪಹರಣದಂತಹ ಹಿಂದಿನ ಘಟನೆಗಳು ನೇರ ಪ್ರಸಾರದ ಅಪಾಯಗಳನ್ನು ಮನವರಿಕೆ ಮಾಡಿಕೊಟ್ಟಿವೆ. ಕೇಬಲ್ ಟೆಲಿವಿಷನ್ ನೆಟ್ವರ್ಕ್ಗಳ (ತಿದ್ದುಪಡಿ) ನಿಯಮಗಳು, 2021 ರ ಷರತ್ತು 6(1)(p) ಪ್ರಕಾರ, ಭಯೋತ್ಪಾದನಾ-ನಿಗ್ರಹ ಕಾರ್ಯಾಚರಣೆಗಳ ಸಮಯದಲ್ಲಿ ಗೊತ್ತುಪಡಿಸಿದ ಅಧಿಕಾರಿಗಳು ನೀಡಿದ ಮಾಹಿತಿಯನ್ನು ಮಾತ್ರ ಪ್ರಸಾರ ಮಾಡಲು ಅನುಮತಿಸಲಾಗಿದೆ. ಎಲ್ಲಾ ಮಾಧ್ಯಮಗಳು ರಾಷ್ಟ್ರದ ಸೇವೆ ಸಂಬಂಧಿತ ಅತ್ಯುನ್ನತ ಮಾನದಂಡಗಳನ್ನು ಎತ್ತಿಹಿಡಿಯುವ ಮೂಲಕ ಕವರೇಜ್ನಲ್ಲಿ ಜಾಗರೂಕತೆ, ಸೂಕ್ಷ್ಮತೆ ಮತ್ತು ಜವಾಬ್ದಾರಿಯನ್ನು ಕಾಪಾಡಬೇಕು ಎಂದು ಆಗ್ರಹಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.

        
                  
                  
                  
                  
More Stories
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮ …..*
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಾಟಕ್ಕೆ ಬೇಸತ್ತ ವಾಹನ ಸವಾರರು ಮತ್ತು ಸಾರ್ವಜನಿಕರು…