November 4, 2025

‘ಅಂಡರ್ ಗ್ರೌಂಡ್ ಹೊರತು ಪಡಿಸಿ ನೆಲ ಮಹಡಿಯಲ್ಲಿ ವಾಹನಗಳನ್ನು ನಿಲ್ಲಿಸುವ ರೀತಿ ಯೋಜನೆ ರೂಪಿಸುವ ಆಲೋಚನೆಯಿದೆ – ಡಿಸಿಎಂ ಡಿ.ಕೆ.ಶಿವಕುಮಾರ್

{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false}

ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಸುರಿದ ಮಳೆಯಿಂದ ಉಂಟಾದ ವಿದ್ಯುತ್ ಅವಘಡದಲ್ಲಿ ಬಿ.ಟಿ.ಎಂ 2ನೇ ಹಂತದ ಡಾಲರ್ಸ್ ಕಾಲೋನಿ ಬಳಿಯ ಎಂ.ಎಸ್. ಪಾಳ್ಯದಲ್ಲಿ ಮನಮೋಹನ್ ಕಾಮತ್ ಹಾಗೂ ದಿನೇಶ್ ಎಂಬುವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಘಟನಾ ಸ್ಥಳಕ್ಕೆ ಮಂಗಳವಾರ ಸಂಜೆ ಅಧಿಕಾರಿಗಳ ಜತೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸ್ವಾಂತನ ಹೇಳಿದರು. ನಂತರ ಮಧ್ಯಮಗಳ ಜತೆ ಮಾತನಾಡಿ’ಅಂಡರ್ ಗ್ರೌಂಡ್ ಹೊರತು ಪಡಿಸಿ ನೆಲ ಮಹಡಿಯಲ್ಲಿ ವಾಹನಗಳನ್ನು ನಿಲ್ಲಿಸುವ ರೀತಿ ಯೋಜನೆ ರೂಪಿಸುವ ಆಲೋಚನೆಯಿದೆ.ಅದರ ಮೇಲೆ ಜನರು ವಾಸಕ್ಕೆ ಮನೆ ನಿರ್ಮಾಣ‌ ಮಾಡಿಕೊಳ್ಳಲಿ’ ಎಂದರು.

‘ಅಂಡರ್ ಗ್ರೌಂಡ್ ನಲ್ಲಿ ಸಂಗ್ರಹವಾಗಿದ್ದ ನೀರನ್ನು ಪಂಪ್ ಹಾಕಿ ಖಾಲಿ ಮಾಡುವಾಗ ಅಧಿಕಾರಿಗಳು, ಪೊಲೀಸ್ ಹಾಗೂ ಸಹಾಯ ಮಾಡಲು ಬಂದ ವ್ಯಕ್ತಿಗಳಿಗೂ ವಿದ್ಯುತ್ ಆಘಾತವಾಗಿದೆ. ಈ ವೇಳೆ ಮೃತಪಟ್ಟ ನಾಗರಿಕರಿಗೂ ಪರಿಹಾರ ನೀಡಲಾಗುವುದು. ಮಳೆ ಅವಘಡದಿಂದ ಮೃತಪಟ್ಟವರಿಗೆ 5 ಲಕ್ಷ ಪರಿಹಾರ ನೀಡಲಾಗುತ್ತಿದೆ. ಜಾನುವಾರುಗಳು ಸಹ ಮೃತಪಟ್ಟಿದ್ದು ಇದಕ್ಕೂ ಪರಿಹಾರ ನೀಡಲಾಗುವುದು. ನಮ್ಮ ಅಧಿಕಾರಿಗಳಿಗೆ ದಿನಪೂರ್ತಿ ಎಚ್ಚರವಹಿಸುವಂತೆ ಸೂಚನೆ ನೀಡಲಾಗಿದೆ’ ಎಂದರು.ಇನ್ನು ನಗರದಲ್ಲಿ ಸುರಿದ ಮಳೆ ಸಂದರ್ಭದಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು (ಬಿಬಿಎಂಪಿ) ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ( ಬಿ.ಡಬ್ಲೂ.ಎಸ್.ಎಸ್.ಬಿ) ಅವರಿಂದ ಸರಿಯಾದ ಪ್ರತಿಕ್ರಿಯೆ ದೊರೆಯುತ್ತಿಲ್ಲ ಎನ್ನುವ ಸಾರ್ವಜನಿಕರ ದೂರಿನ ಬಗ್ಗೆ ಕೇಳಿದಾಗ, ಬೆಂಗಳೂರಿನ ಜನಸಂಖ್ಯೆಯು 1.40 ಕೋಟಿ ಇದೆ. ವಾರ್ ರೂಮ್‌ನಲ್ಲಿ ಹೇಗೆ ಕೆಲಸ ನಡೆಯುತ್ತದೆ ಎಂದು ಮಾಧ್ಯಮದವರೇ ಬಂದು ನೋಡಬಹುದು. ಎಲ್ಲರೂ ತಂಡವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.ಮಳೆ ಬಂದು ಅವಘಡ ಉಂಟಾಗಿರುವ ಭಾಗದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಸಾರ್ವಜನಿಕರು ಸಹ ಸಹಕಾರ ನೀಡುತ್ತಿದ್ದಾರೆ. ವಾರ್ ರೂಮ್ ಮೂಲಕವೂ ಪರಿಸ್ಥಿತಿಯನ್ನು ಅವಲೋಕಿಸಲಾಗುತ್ತಿದೆ ಎಂದು ಹೇಳಿದ್ದಾರೆ.

error: Content is protected !!