November 4, 2025

“ಜೀವನ್ಮುಖಿ” ಪತ್ರಿಕೆಯ 15 ನೇ ವಾರ್ಷಿಕೋತ್ಸವ , ವಾರ್ಷಿಕ ಪ್ರಶಸ್ತಿ ಪ್ರದಾನ , ವಿಶೇಷ ಸ್ಮರಣ ಸಂಚಿಕೆ ಲೋಕಾರ್ಪಣೆ , ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ಪ್ರದಾನ ಸಮಾರಂಭ….

ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆಯ ಸಹಯೋಗದೊಂದಿಗೆ ಜೀವನ್ಮುಖಿ ಪಾಕ್ಷಿಕ ಪತ್ರಿಕೆಯು ನೀಡುತ್ತಿರುವ 15 ನೇ ವರ್ಷದ ಜೀವನ್ಮುಖಿ ಪ್ರಶಸ್ತಿ ಪುರಸ್ಕಾರಕ್ಕೆ ರಾಜ್ಯ ಮಟ್ಟದ ಗಣ್ಯ ಸಾಧಕರು, ವಿದ್ಯಾರ್ಥಿಗಳ ಪ್ರತಿಭಾ ಸಂಪನ್ನ ಪುರಸ್ಕಾರದ ಈ ಸಮಾರಂಭವು ಜೂ. 22 ರಂದು ಸಂಜೆ 4 ಗಂಟೆಗೆ ನಗರದ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯಲಿದೆ. ಹಿರಿಯ ಸಾಹಿತಿಗಳಾದ ಗೊ.ರು. ಚೆನ್ನಬಸಪ್ಪ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಸಂಚಾರ ಜಂಟಿ ಪೋಲೀಸ್ ಆಯುಕ್ತರಾದ ಎಂ.ಎನ್. ಅನುಚೇತ್ ವಿಶೇಷ ಸಂಚಿಕೆ ಬಿಡುಗಡೆ ಮಾಡುವರು. ಲೇಖಕರು ಹಾಗೂ ಕರ್ನಾಟಕ ಜಾನಪದ ಪರಿಷತ್ತು ನಿಕಟಪೂರ್ವ ಅಧ್ಯಕ್ಷರಾದ ಟಿ.ತಿಮ್ಮೇಗೌಡ ಅಧ್ಯಕ್ಷತೆ ವಹಿಸುವರು.

error: Content is protected !!